ಕಾಡುವ ಭಾವಗಳಿಗೆ ಹಾಡಲೊಂದಿಷ್ಟು ಜಾಗ...

ಮಂಗಳವಾರ, ಮಾರ್ಚ್ 16, 2010

ವಿಪರ್ಯಾಸ

ಧನದಾಹ ತೊರೆದು
ಬೆಟ್ಟದ ಮೇಲೆ ಬೆತ್ತಲೆ ನಿಂತ
ಬಾಹುಬಲಿಯ
ಕಾಲಿನ ಬಳಿ
ಕಾಣಿಕೆ ಹುಂಡಿ…!

# ## ## ## #

ತಣ್ಣನೆಯ
ನೀರಿನಲ್ಲೂ
ಬಿಸಿ ಸೂರ್ಯ
ಬಿಂಬಿಸುತ್ತಾನೆ…

# ## ## #

ಉಳುಮೆ ಮಾಡಿ
ಹೃದಯ ಸೀಳಿ
ಬಿತ್ತಿದರೂ
ಇಳೆ
ನಮಗೆ
ಹಸಿರನ್ನೇ
ಕೊಡುತ್ತಾಳೆ..

# ## ## #

ಕಾಲಡಿಯ
ಬೆಲೆಬಾಳುವ
ಮಣ್ಣನು ಬಿಟ್ಟು
ಕಡಲಾಳದ
ಬಿಳಿ ಮುತ್ತಿಗೆ
ಹಂಬಲಿಸುತ್ತೇವೆ…

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನುಇಲ್ಲಿ ಬರೆಯಿರಿ