ಕಾಡುವ ಭಾವಗಳಿಗೆ ಹಾಡಲೊಂದಿಷ್ಟು ಜಾಗ...

ಶುಕ್ರವಾರ, ಜುಲೈ 2, 2010

ರನ್ನ ಚರಿತ

ಹತ್ತನೆಯ ಶತಮಾನದೋಳ್
ತಾನ್ ಬರೆದ
ಮಹಾಭಾರತದ
‘ಸಾಹಸ ಭೀಮ ವಿಜಯ೦’
ಎಂಬ ಕೃತಿಯ೦
ಪ್ರಸ್ತುತ
ಇಪ್ಪತ್ತೊ೦ದನೆಯ ಶತಮಾನದೋಳ್
‘ನವಭಾರತ’ವೆಂಬ ಪೆಸರೋಳ್
ಚಲನಚಿತ್ರವಾಗಿರ್ಪದೆ೦ಬ
ಮಿಥ್ಯ ಸುದ್ದಿಯಂ ಕೇಳಿ
ತಡಬಡಿಸಿ ಸ್ವರ್ಗದಿಂದಿಳಿದು
ಬ೦ದನಾರನ್ನ ಮಹಾಶಯನ೦
ಭುವಿಯಲವತರಿಸಿ
ತನ್ನ ನಾಡಾಲ್ ಇರ್ಪ ಒ೦ದು
ಸಿನೆಮಾ ಥಿಯೇಟರ೦ ಪೊಕ್ಕು
ಆ ಚಲನಚಿತ್ರ೦ ನೋಳ್ಪೆ
ಆ ಲಲನೆಯರ ಕಂಡು
ಅರೆಕ್ಷಣದಲ್ಲಿ
ಹೆದರಿ-ಬೆದರಿ ಬೆವರ್ಪಲಾಗಿ
ಪ್ರಜ್ಞೆ ತಪ್ಪಿ ಭುವಿಗುರುಳಿ
ಮತ್ತೆ ಮಣ್ಣಾದನಾ ರನ್ನ ಭೂಪ೦…!

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನುಇಲ್ಲಿ ಬರೆಯಿರಿ